Rao meaning in hindi
Rao caste in karnataka
Rao caste history...
ಪಂಜೆ ಮಂಗೇಶರಾಯ್
ಪಂಜೆ ಮಂಗೇಶರಾಯರು | |
---|---|
ಚಿತ್ರ:Panje m (1).jpg ಶ್ರೀ ಪಂಜೆ ಮಂಗೇಶರಾಯರು | |
ಜನನ | ಬಂಟವಾಳ |
ವೃತ್ತಿ | ಮುಖ್ಯೋಪಾಧ್ಯಾಯ, ಲೇಖಕ |
ರಾಷ್ಟ್ರೀಯತೆ | ಭಾರತ |
ಕಾಲ | 1874 - 1937 |
ಪ್ರಕಾರ/ಶೈಲಿ | ಜಾನಪದ ಅಧ್ಯಯನ, ಕಾವ್ಯ, ಅನುವಾದ |
ವಿಷಯ | ಕನ್ನಡ |
ಸಾಹಿತ್ಯ ಚಳುವಳಿ | ನವೋದಯ |
ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ).
ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.
Rao meaningಶಿಶು ಸಾಹಿತ್ಯದಲ್ಲಿ ಅಪಾರ ಮುತುವರ್ಜಿಯ ಸೇವೆ ಸಲ್ಲಿಸಿದವರು.[೧][೨][೩]
ಪೂರ್ವಜರು
ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಹತ್ತಿರವಿರುವ ಪಂಜ ಎಂಬಲ್ಲಿ ಮಂಗೇಶರಾಯರ ಪೂರ್ವಜರು ವಾಸಿಸುತ್ತಿದ್ದರು.
ರಾಯರ ಮುತ್ತಜ್ಜ ದಾಸಪ್ಪಯ್ಯನವರ ಅಕಾಲ ಮರಣದ ನಂತರ ಅವರ ಪತ್ನಿ ತನ್ನ ಕುಟುಂಬದೊಡನೆ ನೇತ್ರಾವತಿ ನದಿಯ ದಡದಲ್ಲಿರುವ ಬಂಟವಾಳದಲ್ಲಿ ಬಂದು ನೆಲೆಸಿದರು. ಬಳಿಕ ಈ ಕುಟುಂಬದವರನ್ನು ಪಂಜೆ ಎಂದು ಕರೆಯುವದು ರೂಢಿಯಾಯಿತು. ದಾಸಪ್ಪಯ್ಯವರ ಒಬ್ಬನೇ ಮಗ ವಿಟ್ಠಲನವರಿಗೆ ಮೂವರು ಪುತ್ರರು.